ಲೋಕಸಭೆಯ ಬಜೆಟ್ ಅಧಿವೇಶನದಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಯ ಸಂದರ್ಭದಲ್ಲಿ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಡೋಕ್ಲಾಮ್ ಬಿಕ್ಕಟ್ಟು ಮತ್ತು ಮಾಜಿ ಸೇನಾ ಮುಖ್ಯಸ್ಥ ಎಂ.ಎಂ. ನರವಾಣೆ ಅವರ ಪುಸ್ತಕವನ್ನು ಉಲ್ಲೇಖಿಸಿದ್ದು ದೊಡ್ಡ ಸಂಚಲನಕ್ಕೆ ಕಾರಣವಾಗಿದೆ.ರಾಹುಲ್ ಗಾಂಧಿ ಅವರು ಡೋಕ್ಲಾಮ್ ವಿಷಯವನ್ನು ಪ್ರಸ್ತಾಪಿಸುತ್ತಾ, ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರು ಬರೆದಿರುವ ಪುಸ್ತಕದ ಸಾರಾಂಶವನ್ನು ಉಲ್ಲೇಖಿಸಲು ಯತ್ನಿಸಿದರು. ಈ ಪುಸ್ತಕದಲ್ಲಿ ಚೀನಾ ಮತ್ತು ಡೋಕ್ಲಾಮ್ ಬಿಕ್ಕಟ್ಟಿನ ಬಗ್ಗೆ ಮಹತ್ವದ ಅಂಶಗಳಿವೆ ಎಂದು ಅವರು ಪ್ರತಿಪಾದಿಸಿದರು. ಅಷ್ಟೇ ಅಲ್ಲದೆ, ಕೇಂದ್ರ ಸರ್ಕಾರವು ಈ ಪುಸ